ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ಮಂಡನೆ ಆರಂಭವಾಗಿದ್ದು, ರೈತರು ಹಾಗೂ ಕೃಷಿ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ.
ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಈ ಬಜೆಟ್ ಪೂರಕವಾಗಿದೆ ಎಂದು ಹೇಳಿದ್ದಾರೆ.