January14, 2026
Wednesday, January 14, 2026
spot_img

‘ಕೈ’ ನಾಯಕರಿಗೆ ದೆಹಲಿ ಪಂಚಾಯಿತಿ: ಮಂತ್ರಿಗಿರಿ ಮೇಲೆ ಕಣ್ಣಿಟ್ಟ ಶಿಸ್ತಿನ ಸಿಪಾಯಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಮತ ಮತ್ತು ಸಂಪುಟ ಪುನರ್‌ರಚನೆಯ ಚರ್ಚೆಗಳ ನಡುವೆ, ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾಹಿತಿ ನೀಡಿದ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, “ನಿನ್ನೆ ವಿಮಾನ ನಿಲ್ದಾಣದಲ್ಲಿ ಕೇವಲ ಪ್ರಾಥಮಿಕ ಮಾತುಕತೆ ನಡೆದಿದೆ. ಹೆಚ್ಚಿನ ಚರ್ಚೆಗಾಗಿ ರಾಹುಲ್ ಗಾಂಧಿ ಇಬ್ಬರನ್ನೂ ದೆಹಲಿಗೆ ಕರೆದಿದ್ದಾರೆ,” ಎಂದು ತಿಳಿಸಿದರು.

ಸಂಕ್ರಾಂತಿ ಹಬ್ಬದ ನಂತರ ಈ ಭೇಟಿ ನಡೆಯುವ ಸಾಧ್ಯತೆಯಿದ್ದು, ಸಂಪುಟ ವಿಸ್ತರಣೆ ಹಾಗೂ ಮಂತ್ರಿ ಸ್ಥಾನದ ಆಕಾಂಕ್ಷಿಗಳ ಬೇಡಿಕೆಗಳ ಬಗ್ಗೆ ಅಲ್ಲಿ ಅಂತಿಮ ತೀರ್ಮಾನವಾಗಲಿದೆ. ತಾವೂ ಸಹ ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಹೈಕಮಾಂಡ್ ಸೂಚನೆಯಂತೆ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂಬ ವಿಶ್ವಾಸವನ್ನು ಪಟ್ಟಣ್ ವ್ಯಕ್ತಪಡಿಸಿದ್ದಾರೆ.

Most Read

error: Content is protected !!