ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದು ಬಿಜೆಪಿ-ಜೆಡಿಎಸ್ ನಾಯಕರ ಸಭೆಯ ವೇಳೆ ಸುದ್ದಿಗೋಷ್ಠಿಯಲ್ಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ ಆಗಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.
ಅಪೋಲೋ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಚ್ ಡಿ ಕುಮಾರಸ್ವಾಮಿ ಆರಾಮವಾಗಿದ್ದಾರೆ. ಸ್ವಲ್ಪ ಆಯಾಸವಾಗಿದೆ. ಅವರಿಗೆ ಕೆಲಸದ ಒತ್ತಡ ಇತ್ತು ಎಂದರು.
ಸದ್ಯ ವೈದ್ಯರು ಸ್ಕ್ಯಾನಿಂಗ್ ಗೆ ಕರೆದುಕೊಂಡು ಹೋಗಿದ್ದಾರೆ. ಯಾರು ಗಾಬರಿ ಪಡುವ ಅಗತ್ಯ ಇಲ್ಲ. ಕುಮಾರಸ್ವಾಮಿಯವರನ್ನು ಇದೀಗ ಮಾತಾಡಿಸಿಕೊಂಡು ಬಂದಿದ್ದೇನೆ. ಸದ್ಯ ಚೆನ್ನಾಗಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.