ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೀವನದಿ ಕಾವೇರಿಗೆ ಬಾಗಿನ ಅರ್ಪಿಸಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೂ ಮುನ್ನ ಮೈಸೂರಿನ ಮೈಲಾರಿ ಹೊಟೇಲ್ನಲ್ಲಿ ದೋಸೆ ತಿಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೊಟೇಲ್ನಲ್ಲಿ ಬ್ರೇಕ್ಫಾಸ್ಟ್ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ ಜತೆಗೆ ಅವರ ಬೆಂಗಲಿಗರು ಕೂಡ ಅವರಿಗೆ ಸಾಥ್ ನೀಡಿದರು.
ಸಚಿವ ಚೆಲುವರಾಯಸ್ವಾಮಿ ಕೂಡ ಮೈಲಾರಿ ಹೊಟೇಲ್ನಲ್ಲಿ ತಿಂಡಿ ಮಾಡಿದ್ದಾರೆ. ತಿಂಡಿ ಸೇವಿಸಿ ಅಲ್ಲಿಂದ ಸಿಎಂ ಸಿದ್ದರಾಮಯ್ಯ ಕೆಎಸ್ಆರ್ ಡ್ಯಾಂಗೆ ಬಾಗಿನ ಅರ್ಪಿಸಲು ತೆರಳಿದ್ದಾರೆ. ಎಲ್ಲರ ಜೊತೆ ಕುಳಿತು ಸಿಎಂ ಬ್ರೇಕ್ಫಾಸ್ಟ್ ಮಾಡಿದ್ದಾರೆ.