ಸೆಲ್ಫಿಗಾಗಿ, ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನದಿಗಳಿಗೆ ಅನಗತ್ಯವಾಗಿ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್​ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಘಟಪ್ರಭಾ ನದಿ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆಯ ನೂರಾರು ಕುಟುಂಬಗಳು ತತ್ತರಿಸಿದ್ದು, ಈ ಹಿನ್ನಲೆ ನೆರೆ ಪೀಡಿತ ಪ್ರದೇಶಕ್ಕೆ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು,ರಾಜ್ಯದ ಜನತೆ ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿದರೆ ಲಾಠಿ ಪ್ರಯೋಗ ಮಾಡಲು ಸೂಚಿಸಿದ್ದೇನೆ ಎಂದರು.

ಮೀನು ಹಿಡಿಯುವುದು, ಕೃಷಿ ಚಟುವಟಿಕೆ ಎಂದು ಇಳಿಯುವುದು, ಸೆಲ್ಫಿಗಾಗಿ ನದಿ ಅಥವಾ ಹೊಳೆಗೆ ಇಳಿಯುವವರು ಒಳ್ಳೆ ಮಾತಿಗೆ ಗೌರವ ಕೊಡಲಿಲ್ಲ ಅಂದರೆ ಲಾಠಿ ಏಟು ನಿಶ್ಚಿತ. ನಮ್ಮ ರಾಜ್ಯದಲ್ಲಿ ಪ್ರಾಣಹಾನಿಯಾಗುವುದಕ್ಕೆ ನಾವು ಬಿಡುವುದಿಲ್ಲ ಏನು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!