ವಯನಾಡಿನ ಭೂಕುಸಿತ ಸ್ಥಳಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡಿನ ಚೂರಲ್ಮಲಾದ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಭೇಟಿ ನೀಡಿದ್ದಾರೆ.

ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆಯ ಮೇಲೆ ಸಾಗಿ ಪ್ರವಾಹದಪೀಡಿತ ಸ್ಥಳವನ್ನು ಪರಿಶೀಲಿಸಿದ ಅವರು ಸಂತ್ರಸ್ತರನ್ನು ಭೇಟಿಯಾಗಿದ್ದಾರೆ.

ಭಾರೀ ಮಳೆಯ ನಂತರ ಮಂಗಳವಾರ ಕೇರಳದ ವಯನಾಡಿನಲ್ಲಿ ಮೂರು ಭೂಕುಸಿತಗಳು ಸಂಭವಿಸಿದ ನಂತರ ಇದುವರೆಗೆ 256 ಜನರು ಸಾವನ್ನಪ್ಪಿದ್ದಾರೆ. ಕೇರಳ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹೆಚ್ಚು ಹಾನಿಗೊಳಗಾಗಿವೆ. ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸೇನೆಯು ಸುಮಾರು 1,000 ಜನರನ್ನು ರಕ್ಷಿಸಲಾಗಿದೆ ಮತ್ತು 220 ಜನರು ಇನ್ನೂ ನಾಪತ್ತೆಯಾಗಿದ್ದಾರೆ.

ಈಗಾಗಲೇ ಸೈನ್ಯವು ಕೋಝಿಕ್ಕೋಡ್‌ನಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಸ್ಥಾಪಿಸಿದೆ . ರಕ್ಷಣಾ ಕಾರ್ಯಾಚರಣೆಗೆ ಕನಿಷ್ಠ 1,500 ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮುಂದಿನ 2 ದಿನಗಳಲ್ಲಿ ವಯನಾಡ್ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!