ವಯನಾಡು ಭೂಕುಸಿತದ ಸಂತ್ರಸ್ತರಿಗೆ ನೆರವು: 1 ಕೋಟಿ ರೂಪಾಯಿ ದೇಣಿಗೆ ನೀಡಿದ ಚಿರಂಜೀವಿ, ರಾಮ್​ ಚರಣ್!

ಹೊಸದಿಗಂತ ಡಿಜಿಟಲ್ ಡೆಸ್ಕ್; 

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆಈವರೆಗೂ 300ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಊರಿಗೆ ಊರೇ ಸ್ಮಶಾನವಾಗಿದ್ದು, ಭೂಕುಸಿತದ ಸಂತ್ರಸ್ತರಿಗೆ ನೆರವಿನ ಅವಶ್ಯಕತೆ ಇದೆ. ‘ಮೆಗಾ ಸ್ಟಾರ್’ ಚಿರಂಜೀವಿ, ರಾಮ್​ ಚರಣ್​ ಅವರು ಜೊತೆಯಾಗಿ 1 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಚಿರಂಜೀವಿ ಅವರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪಕೃತಿಯ ವಿಕೋಪಕ್ಕೆ ನೂರಾರು ಜನರು ಪ್ರಾಣ ಕಳೆದಕೊಂಡಿದ್ದಕ್ಕೆ ತೀವ್ರ ನೋವು ಉಂಟಾಗಿದೆ. ವಯನಾಡು ದುರಂತದ ಸಂತ್ರಸ್ತರಿಗಾಗಿ ನನ್ನ ಮನ ಮಿಡಿಯುತ್ತಿದೆ. ಚರಣ್​ ಮತ್ತು ನಾನು ಜೊತೆಯಾಗಿ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ತರ ಬೆಂಬಲಕ್ಕೆ ನಿಲ್ಲುತ್ತೇವೆ. ನೋವಿನಲ್ಲಿ ಇರುವ ಎಲ್ಲರಿಗಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಮೆಗಾ ಸ್ಟಾರ್ ಚಿರಂಜೀವಿ ಅವರು ಬರೆದುಕೊಂಡಿದ್ದಾರೆ.

ಟಾಲಿವುಡ್​, ಕಾಲಿವುಡ್​ ಮುಂತಾದ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ದೇಣಿಗೆ ನೀಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!