ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾದಗಿರಿ ಮೃತ ಪಿಎಸ್ಐ ಪರಶುರಾಮ್ ಪತ್ನಿಗೆ ಸರ್ಕಾರದಿಂದ ಉದ್ಯೋಗ ನೀಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ.
ಯಾದಗಿರಿ ಪಿಎಸ್ಐ ಸಾವು ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಪಿಎಸ್ಐ ಸಾವು ಪ್ರಕರಣ ಸಿಐಡಿಗೆ ನೀಡಲಾಗಿದೆ. ಅದರ ತನಿಖೆ ಮಾಡುತ್ತಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದೇವೆ. ಅದು ಬಂದ ಮೇಲೆ ಸಾವಿಗೆ ಕಾರಣ ತಿಳಿಯುತ್ತದೆ.
ನಾನು ನಾಡಿದ್ದು ಅವರ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ಶ್ರೀಮತಿಗೆ ಕೆಲಸ ಕೊಡಬೇಕು ಎಂದು ನಾವು ತೀರ್ಮಾನ ಮಾಡಿದ್ದೇವೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.