ದಿಗಂತ ವರದಿ ವಿಜಯಪುರ:
ಕಣ್ಣು ಹೊಡೆದು ಸನ್ನೆ ಮಾಡಿದಕ್ಕೆ ಮಹಿಳೆಯೊಬ್ಬಳು ಯುವಕನಿಗೆ ಚಪ್ಪಲಿಯಿಂದ ಥಳಿಸಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣದಲ್ಲಿ ಮಹಿಳೆಗೆ ಕಣ್ಣು ಹೊಡೆದು ಅಸಭ್ಯವಾಗಿ ವರ್ತಿಸಿದ ಕಾರಣಕ್ಕೆ, ಕುಪಿತಗೊಂಡ ಮಹಿಳೆ ಚಪ್ಪಲಿ ಏಟು ನೀಡಿದ್ದಾಳೆ, ಯುವಕ ಚಪ್ಪಲಿ ಏಟು ತಿಂದು ಪರಾರಿಯಾಗಿದ್ದಾನೆ.
ಈ ಘಟನೆಯಲ್ಲಿ ಚಪ್ಪಲಿ ಏಟು ನೀಡಿದ ಮಹಿಳೆ ಹಾಗೂ ಏಟು ತಿಂದ ಯುವಕನ ಹೆಸರು ತಿಳಿದುಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.