82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ ಬಿಎಸ್‌ವೈ ನನ್ನ ಬಗ್ಗೆ ಮಾತಾಡೋದು ಸರೀನಾ?: ಸಿದ್ದು ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಆಗಿದೆ. ಕೋರ್ಟ್ ದಯೆಯಿಂದ ಬಚಾವಾಗಿದ್ದಾರೆ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನು ಉಳಿದಿದೆ, ಅವರಿಗೆ 82 ವರ್ಷ ಈ ವಯಸ್ಸಲ್ಲಿ ಪೋಕ್ಸೋ ಕೇಸ್‌ ಎದುರಿಸಿದ್ದಾರೆ, ಇವರು ನನ್ನ ಬಗ್ಗೆ ಮಾತನಾಡೋದು ಸರೀನಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ಬಿಎಸ್​ ಯಡಿಯೂರಪ್ಪ ಹೇಳಿಕೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ, ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಬಿಎಸ್​ವೈಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಇಲ್ಲ ಎಂದರು. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.

ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಅವರಿಗೆ ರಾಜಕೀಯ ನಿವೃತ್ತರಾಗಲು ಹೇಳಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಎಸ್ ವೈ ವಿರುದ್ಧ ಕೇಸು ದಾಖಲಿಸಿದ್ದಿರಿ.
    ನ್ಯಾಯಾಧೀಶರು ಪ್ರಕರಣ ಅರಿತು ಜಾಮೀನು ನೀಡಿದ್ದಾರೆ.
    ನಿಮಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ..

LEAVE A REPLY

Please enter your comment!
Please enter your name here

error: Content is protected !!