ಹೊಸದಿಗಂತ ಡಿಜಿಟಲ್ ಡೆಸ್ಕ್:
ರೀಲ್ಸ್ ಹುಚ್ಚಿನಿಂದ ಅನೇಕ ಜೀವಗಳು ಬಲಿಯಾಗಿವೆ. ಇದೀಗ ಓರ್ವ ಯುವಕ ಅಪಾಯಕಾರಿ ಸಾಹಸ ಪ್ರದರ್ಶಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಗಂಗಾನದಿ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಯುವಕನೊಬ್ಬ ಹತ್ತಿ ನದಿಗೆ ಹಾರಿದ ಘಟನೆ ನಡೆದಿದೆ. ಕಾನ್ಪುರದ ಭೈರವ್ ಘಾಟ್ ಬಳಿ ಈ ಘಟನೆ ನಡೆದಿದೆ.
ಭೈರವ್ ಘಾಟ್ ಅಂಚಿನಲ್ಲಿರುವ ವಿದ್ಯುತ್ ಕಂಬಕ್ಕೆ ಈತ ಹತ್ತಿ ತುಂಬಿ ಹರಿಯುತ್ತಿರುವ ನದಿಗೆ ಹಾರಿದ್ದಾನೆ. ಈ ವಿಡಿಯೋ ಇದೀಗ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಭೈರವ ಘಾಟ್ ತಟದಲ್ಲಿ ವಿದ್ಯುತ್ ಕಂಬವಿದೆ. ಈ ಕಂಬಕ್ಕೆ ಆಧಾರವಾಗಿ ಮತ್ತೊಂದು ವಿದ್ಯುತ್ ಕಂಬ ಅಳವಡಿಸಲಾಗಿದೆ. ಈ ಕಂಬದ ಮೂಲಕ ವಿದ್ಯುತ್ ಕಂಬಕ್ಕೆ ಹತ್ತಿದ್ದಾನೆ. ಬಳಿಕ ಕೆಲ ಕಾಲ ವಿದ್ಯುತ್ ಕಂಬದ ಮೇಲೆ ಕುಳಿತ್ತಿದ್ದ. ಅದೃಷ್ಟವಶಾತ್ ಆ ಸಮಯದಲ್ಲಿ ವಿದ್ಯುತ್ ಇರಲಿಲ್ಲ. ಹಾಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ನದಿಗೆ ಹಾರಿದ ಯುವಕ ಬಳಿಕ ಈಜಿ ದಡ ಸೇರಿದ್ದಾನೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಆಕ್ರೋಶ ಹೆಚ್ಚಾಗಿದೆ. ಈ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು. ಅಪಾಯಕಾರಿ ಸ್ಟಂಟ್ಗಳೊಂದಿಗೆ ಜೀವಕ್ಕೆ ಕುತ್ತು ತರುತ್ತಿದ್ದಾರೆ. ಈ ರೀತಿಯ ಸಾಹಸಕ್ಕೆ ಅವಕಾಶ ನೀಡಬಾರದು. ಇದು ಉತ್ತಮ ಸಮಾಜಕ್ಕೆ ಕೆಟ್ಟ ಸಂಕೇತ ಎಂದು ಹಲವರು ನಂಬುತ್ತಾರೆ. ಇಲ್ಲಿನ ವಿದ್ಯುತ್ ಕಂಬ ಏರುವ ಹಕ್ಕು ಕೊಟ್ಟವರು ಯಾರು? ಸಿಬ್ಬಂದಿ ಎಲ್ಲಿದ್ದಾರೆ ಎಂದು ಕೆಲವರು ಪ್ರಶ್ನಿಸಿದ್ದಾರೆ.
कानपुर में युवक का स्टंट करते वीडियो वायरल
खंभे पर चढ़कर युवक गंगा नदी में छलांग लगा रहा
भैरव घाट का बताया जा रहा वायरल वीडियो. #Kanpur#viralvideo pic.twitter.com/eBXFdotDpj— tarun yadav / तरुण यादव (@tarunya76832195) August 6, 2024