ನಾನು ಬದಲಾಗುತ್ತೇನೆ, ಇನ್ಮುಂದೆ ವಿಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನು ಬದಲಾಗುತ್ತೇನೆ, ಈಗ ಮೊದಲಿನ ಸಿದ್ದರಾಮಯ್ಯ ಅಲ್ಲ. ಇನ್ಮುಂದೆ ವಿಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಬಗ್ಗೆ ಹೋಗ್ಲಿ ಬಿಡು, ಹೋಗ್ಲಿ ಬಿಡು ಅಂತ ನಾನು ಅಂತಿದ್ದೆ. ಅದೇ ನನಗೆ ಈಗ ಮುಳ್ಳಾಗ್ತಿದೆ. ವಿಪಕ್ಷಗಳ ಎಲ್ಲಾ ನಾಯಕರ ಹಳೇ ಕಥೆ ಓಪನ್ ಮಾಡ್ತೀನಿ. ದ್ವೇಷದ ರಾಜಕಾರಣ ಅಂದರೂ ಪರವಾಗಿಲ್ಲ. ನಾನು ಇನ್ಮುಂದೆ ಡೋಂಟ್ ಕೇರ್ ಎಂದು ಹರಿಹಾಯ್ದರು.

ತಪ್ಪೇ ಮಾಡದ ನನ್ನ ಮೇಲೆ ಬೀದಿ ಬೀದಿ ಸುತ್ತಿಕೊಂಡು ಸುಳ್ಳು ಹಬ್ಬಿಸಿ ನನ್ನ ಹೆಸರು ಕೆಡಿಸುತ್ತಿದ್ದಾರೆ. ಈ ವಿಚಾರದಲ್ಲಿ ನಾನಿನ್ನು ತಾಳ್ಮೆಯಾಗಿರಲ್ಲ. ಯಾರೇ ಬಂದು ಏನೇ ಒತ್ತಡ ಹೇರಿದರೂ ನಾನು ಇನ್ಮೇಲೆ ವಿಪಕ್ಷಗಳ ವಿಚಾರದಲ್ಲಿ ತಾಳ್ಮೆಯಾಗಿರುವುದಿಲ್ಲ ಎಂದು ಕಿಡಿಕಾರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!