ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಮರನಾಥ್‌ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಹಲ್ಗಾಮ್ ಮಾರ್ಗ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಈ ಕಾರಣದಿಂದ ಎರಡೂ ಕಡೆಗಳಲ್ಲಿ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಬುಧವಾರ ನಿರ್ವಹಣೆಗಾಗಿ ಪಹಲ್ಗಾಮ್ ಮಾರ್ಗವನ್ನು ಮುಚ್ಚಲಾಗಿತ್ತು.

ಅಮರನಾಥ ಯಾತ್ರೆಯ ಪಹಲ್ಗಾಮ್ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಭಿದುರಿ ಹೇಳಿದ್ದಾರೆ. ಮಳೆಯ ಕಾರಣ ಅಮರನಾಥ ಯಾತ್ರೆಯ ಬಾಲ್ಟಾಲ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಿದೆ.

ಯಾತ್ರಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಬಾಲ್ಟಾಲ್ ಮಾರ್ಗದ ಮೂಲಕ ಯಾತ್ರೆಯ ಪ್ರವೇಶ ಮತ್ತು ನಿರ್ಗಮನವನ್ನು ಅನುಮತಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!