ವೈದ್ಯೆಯ ಅತ್ಯಾಚಾರ ಪ್ರಕರಣ: ಸಿಬಿಐಗೆ ಒಪ್ಪಿಸುವಂತೆ ಮಮತಾ ಬ್ಯಾನರ್ಜಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಲು ವಿಫಲವಾದರೆ ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಭಾನುವಾರದೊಳಗೆ ಇದನ್ನು ಪರಿಹರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ, ನಾವು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುತ್ತೇವೆ. ಆದಾಗ್ಯೂ, ಕೇಂದ್ರೀಯ ತನಿಖಾ ಸಂಸ್ಥೆಯ ಯಶಸ್ಸಿನ ಪ್ರಮಾಣವು ತುಂಬಾ ಕಡಿಮೆಯಾಗಿದೆ, ”ಎಂದು ವೈದ್ಯರ ಮನೆಗೆ ಭೇಟಿ ನೀಡಿದ ನಂತರ ಬ್ಯಾನರ್ಜಿ ಹೇಳಿದ್ದಾರೆ.

ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಪ್ರತಿಭಟನೆ ಮುಂದುವರಿದಿದೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಸಂದೀಪ್ ಘೋಷ್ ತಮ್ಮ ಹುದ್ದೆಗೆ ಮತ್ತು ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!