ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಿಬಿಐ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೈಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸಿಬಿಐ ಆರೋಪಿಯನ್ನು ತನ್ನ ವಶಕ್ಕೆ ಪಡೆದಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿತ್ತು.

ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!