ಸನ್ಮಾನ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿ ಭಾರತಕ್ಕೆ ಮರಳಿದ ಕುಸ್ತಿಪಟು ವಿನೇಶ್​ ಪೋಗಟ್​ ಅವರಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ. ನೂರಾರು ಅಭಿಮಾನಿಗಳು ಡೋಲು ಬಾರಿಸಿ, ನೋಟು ಹಾಗೂ ಹೂವಿನ ಹಾರ ಹಾಕಿ, ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ವಿನೇಶ್​ ತವರಾದ ಹರ್ಯಾಣದ ಬಲಾಲಿಗೆ ಕಾರ್​ನಲ್ಲಿ ಮೆರವಣಿ ಮಾಡುವ ಮೂಲಕ ಕರೆದೊಯ್ಯಲಾಗಿತ್ತು. ಇದೀಗ ತವರಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಿನೇಶ್​ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಈ ವಿಡಿಯೊ ಇದೀಗ ವೈರಲ್​ ಆಗಿದೆ.ವಿನೇಶ್​ ಬೇಗನೆ ಚೇತರಿಸಿಕೊಳ್ಳಲಿ ಎಂದು ಜನರು ಆಶಿಸಿದ್ದಾರೆ.

https://x.com/nnis_sports/status/1824906417012457565?ref_src=twsrc%5Etfw%7Ctwcamp%5Etweetembed%7Ctwterm%5E1824906417012457565%7Ctwgr%5E1d7427455af37a2de94493f7d1c02303214058b4%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-kannadad%2Ftopnews-updates-topnews%3Fmode%3Dpwaaction%3Dclick

ವೇದಿಕೆಯಲ್ಲಿ ಆಸೀನರಾಗಿದ್ದ ವಿನೇಶ್​ ಏಕಾಏಕಿ ಮೂರ್ಛೆ ಹೋಗಿ ತಾವು ಕುಳಿತಿದ್ದ ಕುರ್ಚಿಗೆ ಒರಗಿಕೊಂಡು ಮಲಗಿರುವುದನ್ನು ಕಾಣಬಹುದಾಗಿದೆ. ಪಕ್ಕದಲ್ಲೇ ಇದ್ದ ಭಜರಂಗ್​ ಪೂನಿಯಾ ವಿನೇಶ್​ಗೆ ನೀರು ಕೊಟ್ಟು ಉಪಚರಿಸಿದ್ದಾರೆ.

ಫೈನಲ್​ ಪಂದ್ಯಕ್ಕೂ ಮುನ್ನ ಹೆಚ್ಚಳವಾಗಿದ್ದ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ, ದೇಹದಿಂದ ರಕ್ತವನ್ನು ಕೂಡ ತೆಗಿದಿದ್ದರು. ರಕ್ತ ತೆಗೆದ ಪರಿಣಾಮ ಅಸ್ವಸ್ಥರಾಗಿ ಆಸ್ಪತ್ರೆ ಕೂಡ ಸೇರಿದ್ದರು. ಈ ಅಸ್ವಸ್ಥದಿಂದ ಅವರು ಇನ್ನೂ ಸರಿಯಾಗಿ ಚೇತರಿಕೊಂಡಂತೆ ಕಾಣುತ್ತಿಲ್ಲ. ಭಾರತಕ್ಕೆ ಬಂದ ವೇಳೆ ಅವರು ಬಿಡುವಿಲ್ಲದೆ ಸರಿ ಸುಮಾರು 20 ಗಂಟೆ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಮೂರ್ಛೆ ಹೋದಂತೆ ಕಾಣುತ್ತಿದೆ. ಕೆಲ ದಿನಗಳು ವಿಶ್ರಾಂತಿ ಪಡೆದು ಆ ಬಳಿಕ ಸನ್ಮಾನ ಸಮಾರಂಭಕ್ಕೆ ಹೋದರೆ ಉತ್ತಮ ಎಂದು ಕೆಲ ನೆಟ್ಟಿಗರು ಸಲಹೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!