ಕೊಲ್ಕತ್ತಾ ರೇಪ್‌ & ಮರ್ಡರ್‌ ಕೇಸ್‌: ತುರ್ತು ಸಭೆ ಕರೆದ ರಾಜ್ಯಪಾಲ ಬೋಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂಬಂಧ ರಾಜ್ಯಪಾಲ ಆನಂದ್ ಬೋಸ್ ತುರ್ತು ಸಭೆ ಕರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ವಿಭಾಗಗಳ ಪ್ರತಿನಿಧಿಗಳ ಸಭೆ ಇದಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಬಂಗಾಳ ಗವರ್ನರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಮಾಜಿ ಕ್ರಿಕೆಟಿಗ ಹರ್ಭನ್ ಸಿಂಗ್ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜಭವನಕ್ಕೆ ಪತ್ರ ಬರೆದಿದ್ದಕ್ಕೆ ರಾಜ್ಯಪಾಲರು ತ್ವರಿತವಾಗಿ ಸ್ಪಂದಿಸಿದ್ದು, ರಾಜ್ಯಪಾಲರು ಈ ವಿಷಯದಲ್ಲಿ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸಲು ಮತ್ತು ಈ ನಿಟ್ಟಿನಲ್ಲಿ ಅವರ ಅಭಿಪ್ರಾಯಗಳನ್ನು ಪರಿಶೀಲಿಸಲು ಬಂಗಾಳ ಸಮಾಜದ ಪ್ರತಿನಿಧಿಗಳ ತುರ್ತು ಸಭೆಯನ್ನು ಕರೆದಿದ್ದಾರೆ ಎಂದು ರಾಜಭವನ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!