WEATHER: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ರೆಡ್​ ಅಲರ್ಟ್​ ಘೋಷಣೆ

ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಪ್ರತ್ಯೇಕವಾದ ಲಘು ಮಳೆಯಾಗಲಿದೆ.

ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದಂತೆ ಧಾರವಾಡ, ಬಾಗಲಕೋಟೆ, ಬೀದರ್, ಗದಗ ಮತ್ತು ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಆದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯಲ್ಲಿ ಭಾರೀ ಮಳೆ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!