ಬೆಂಗಳೂರು ಅಭಿವೃದ್ಧಿಗೆ 27,000 ಕೋಟಿ ಅನುದಾನ ಬೇಡಿಕೆ ಇಟ್ಟ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

5 ವರ್ಷಗಳ ಅವಧಿಗೆ ನಗರದ ಅಭಿವೃದ್ಧಿಗಾಗಿ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರ 27 ಸಾವಿರ ಕೋಟಿ ರೂ. ಅನುದಾನ ಕೇಳಿದೆ.

ರಾಜ್ಯಕ್ಕೆ ಆಗಮಿಸಿರುವ 16ನೇ ಹಣಕಾಸು ಆಯೋಗದ ಮುಂದೆ ತಮ್ಮ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ , ಬೆಂಗಳೂರಿಗೆ 27 ಸಾವಿರ ಕೋಟಿ ರೂ. ಅನುದಾನ ಕೊಡುವಂತೆ ಮನವಿ ಮಾಡಿದರು. ಬೆಂಗಳೂರಿಗೆ ಮುಂದಿನ 5 ವರ್ಷಗಳಲ್ಲಿ 55,586 ಕೋಟಿ ರೂ. ಅನುದಾನ ಅವಶ್ಯಕತೆ ಇದೆ. ಇದರಲ್ಲಿ 27,799 ಕೋಟಿ ರೂ. ಅನುದಾನ ಕೊಡುವಂತೆ ಹಣಕಾಸು ಆಯೋಗಕ್ಕೆ ಅವರು ಮನವಿ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕದ ಸಮಾನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 25 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಆಯೋಗದಿಂದ 25 ಸಾವಿರ ಕೋಟಿ ರೂ. ಹೊಂದಾಣಿಕೆ ಅನುದಾನ ಬೇಕಿದೆ. ಇದರ ಜೊತೆಗೆ ಪಶ್ಚಿಮ ಘಟ್ಟಗಳ ಅತ್ಯಂತ ದುರ್ಬಲ ಪ್ರದೇಶಗಳಲ್ಲಿ ಪರಿಣಾಮಕಾರಿ ವಿಪತ್ತು ತಗ್ಗಿಸುವಿಕೆ ಮತ್ತು ಸಕಾಲ ಪರಿಹಾರ ಮತ್ತು ಪುನರ್ವಸತಿ ಕ್ರಮಗಳಿಗೆ 10 ಸಾವಿರ ಕೋಟಿ ರೂ. ಅನುದಾನದ ಬೇಡಿಕೆಯನ್ನ ಸಿಎಂ ಹಣಕಾಸು ಆಯೋಗದ ಮುಂದೆ ಇಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!