ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ: ಹೋರಾಟಕ್ಕೆ ವಿನೇಶ್‌ ಫೋಗಟ್‌ ಸಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹರಿಯಾಣದ ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 200ನೇ ದಿನ ತಲುಪಿದ್ದು, ಪ್ರತಿಭಟನಾ ಸ್ಥಳಕ್ಕೆ ಕುಸ್ತಿಪಟು ವಿನೇಶ್ ಫೋಗಟ್  ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ. ರೈತರ ಪ್ರಮುಖ ಬೇಡಿಕೆಗಳನ್ನು ಬೆಂಬಲಿಸಿದ ಅವರು ಅನ್ನದಾತರ ಕುಂದುಕೊರತೆಗಳನ್ನು ಆಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ರೈತರ ಹೋರಾಟ ಬೆಂಬಲಿಸಿ ಮಾತನಾಡಿದ ಅವರು, ರೈತರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ. ಇದನ್ನು ನೋಡಿ ನೋವಾಗಿದೆ. ಈ ದೇಶದ ಪ್ರಜೆಗಳಾಗಿರುವ ರೈತರು ದೇಶವನ್ನು ನಡೆಸುತ್ತಾರೆ. ಅವರು ದೇಶಕ್ಕೆ ಅನ್ನ ನೀಡದಿದ್ದರೆ ಕ್ರೀಡಾಪಟುಗಳು ಮಾತ್ರವಲ್ಲ, ಯಾರು ಏನೂ ಮಾಡಲು ಸಾಧ್ಯವಿಲ್ಲ.

ನಾವು ದೊಡ್ಡ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುತ್ತೇವೆ. ಆದರೆ ನಮ್ಮ ಕುಟುಂಬ ದುಃಖದಲ್ಲಿರುವುದು ನೋಡಿದಾಗ ನಾವು ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಕಳೆದ ಬಾರಿ ತನ್ನ ತಪ್ಪನ್ನು ಸರ್ಕಾರ ಒಪ್ಪಿಕೊಂಡಿತ್ತು. ಹೀಗಾಗಿ ಕಳೆದ ಬಾರಿ ನೀಡಿದ ಭರವಸೆಗಳನ್ನು ಈಡೇರಿಸಬೇಕು. ಜನರು ಈ ರೀತಿ ಬೀದಿಯಲ್ಲಿ ಕುಳಿತರೆ ದೇಶವು ಪ್ರಗತಿಯಾಗುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!