ನಾನು ಜಿಲ್ಲಾ ಉಸ್ತುವಾರಿ ಸಚಿವ ಮಾತ್ರ, ಡಿಜಿ ಅಲ್ಲ.. ಇದ್ಯಾಕೆ ಹಿಂಗಂದ್ರು ಜಮೀರ್?!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಜಮೀರ್​ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ. ಆದ್ದರಿಂದಲೇ ದರ್ಶನ್​ ಅವರನ್ನು ಬಳ್ಳಾರಿಗೆ ಶಿಫ್ಟ್​ ಮಾಡಲಾಯ್ತಾ ಎಂಬ ಪ್ರಶ್ನೆಗೆ ಜಮೀರ್​ ಉತ್ತರಿಸಿದ್ದಾರೆ.

ನನಗು ಅದಕ್ಕೂ ಸಂಬಂಧ ಇಲ್ಲ. ಪೊಲೀಸ್ ಇಲಾಖೆ ತೀರ್ಮಾನದಿಂದ ಬಳ್ಳಾರಿಗೆ ಶಿಫ್ಟ್​ ಮಾಡಿದ್ದಾರೆ. ನಾನು ಜಿಲ್ಲಾ ಉಸ್ತುವಾರಿ ಸಚಿವ ಮಾತ್ರ. ನಾನು ಡಿಜಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!