ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ-ಪುಣೆ ನಡುವಿನ ವಂದೇ ಭಾರತ್ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 16 ರಂದು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಅದೇ ದಿನ ಅಹಮದಾಬಾದ್ನಿಂದ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸೇವೆಯನ್ನು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ವಂದೇ ಭಾರತ್ ಎಕ್ಸ್ಪ್ರೆಸ್ ಹುಬ್ಬಳ್ಳಿ ಮತ್ತು ಪುಣೆ ನಡುವೆ ಸೆಪ್ಟೆಂಬರ್ 16 ರಿಂದ ಮತ್ತು ಹುಬ್ಬಳ್ಳಿಯಿಂದ ಸೆಪ್ಟೆಂಬರ್ 18 ರಂದು ಸೇವೆಗಳನ್ನು ಪ್ರಾರಂಭಿಸುತ್ತದೆ. ಈ ರೈಲು ಕೊಲ್ಲಾಪುರ ಮೂಲಕ ಹಾದುಹೋಗುವುದಿಲ್ಲ. ಇದು ನೇರ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ಕಾರ್ಯನಿರ್ವಹಿಸಲಿದೆ.