ಕರ್ನಾಟಕ, ಬಾಂಗ್ಲಾ ಸರ್ಕಾರಕ್ಕೂ ವ್ಯತ್ಯಾಸ ಏನು?: ತೇಜಸ್ವಿ ಸೂರ್ಯ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಂಗ್ರೆಸ್ ಸರ್ಕಾರ ಬಂದಾಗ ಟಿಪ್ಪು, ಔರಂಗಜೇಬನ ಸಂತತಿ ಹುಟ್ಟುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಾಗಮಂಗಲ ಗಲಭೆಯನ್ನು ಗೃಹ ಸಚಿವ ಪರಮೇಶ್ವರ್ ಸಣ್ಣ ಘಟನೆ ಎಂದು ಹೇಳುತ್ತಾರೆ. ನಿಮ್ಮ ಮನೆ ರೋಡ್‍ನಲ್ಲಿ ಯಾರಾದ್ರೂ ಗಣೇಶ ಕೂರಿಸಿದಾಗ ಅಲ್ಲಿ ಯಾರಾದ್ರೂ ಕಲ್ಲು ಹೊಡೆದ್ರೆ, ಬೆಂಕಿ ಹಾಕಿದ್ರೆ ಸಣ್ಣ ಘಟನೆ ಎಂದು ಹೇಳುತ್ತೀರಾ? ನಿಮ್ಮ ಮನೆಗೆ ಬೆಂಕಿ ಬೀಳುವವರೆಗೂ ನಿಮಗೆ ಘಟನೆ ಬಗ್ಗೆ ಗೊತ್ತಾಗೊದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದಾರೆ. ಕರ್ನಾಟಕದಲ್ಲಿ ಸಂವಿಧಾನದ ಪ್ರಕಾರ ಕಾನೂನು ನಡೆಯುತ್ತಿದೆಯಾ? ಷರಿಯಾ ಪ್ರಕಾರ ಕಾನೂನು ನಡೆಯುತ್ತಿದೆಯಾ? ಗಣೇಶ ಕೂರಿಸೋಕು ಕರ್ನಾಟಕದಲ್ಲಿ ಸಾಧ್ಯವಿಲ್ಲವಾ? ಬಾಂಗ್ಲಾ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ ಇರೋ ವ್ಯತ್ಯಾಸ ಏನು? ನೀವು ತುಷ್ಟೀಕರಣ ನೀತಿ ಮಾಡಿ, ಗಣೇಶ ಕೂರಿಸಿದರೆ ನೀವು ಬೆಂಕಿ ಹಾಕಿಸಿ ಕಲ್ಲು ಹೊಡೆಸುತ್ತಿದ್ದೀರಿ ಎಂದು ಟೀಕಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!