ಪ್ರಜೆಗಳ ಬ್ಯಾಂಕ್ ಖಾತೆಗೆ ಹಣ ಹಾಕುವ ಜಗತ್ತಿನ ಏಕೈಕ ಸರ್ಕಾರ ನಮ್ಮದು: ಯತೀಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಜಗತ್ತಿನಲ್ಲಿ ಪ್ರಜೆಗಳ ಖಾತೆಗೆ ಹಣ ಜಮಾ ಮಾಡುತ್ತಿರುವ ಏಕೈಕ ಸರ್ಕಾರ ನಮ್ಮದು ಎಂದು ಹೇಳಿದ್ದಾರೆ.

ನಗರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಮುಡಾ ನಿಧಿಯನ್ನು ಬಳಸಲಾಗಿದೆ. ಅದರಲ್ಲಿ ತಪ್ಪೇನು? ಈ ಹಣವನ್ನು ಜನರ ಅನುಕೂಲಕ್ಕೆ ಬಳಸಬೇಕು. ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳು ಆಗಿಲ್ಲ. ಪ್ರತಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದರು.

ಜನರ ಖಾತೆಗೆ ಹಣ ಹಾಕುವ ವಿಶ್ವದ ಏಕೈಕ ಸರ್ಕಾರ ನಮ್ಮದು. ಇಂತಹ ಯೋಜನೆಗಳನ್ನು ಅವರಿಂದ ಸಹಿಸಲು ಸಾಧ್ಯವಿಲ್ಲ, ವಿನಾಕರಣ ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!