ನಟ ದರ್ಶನ್‌ಗೆ ಮತ್ತೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಅರ್ಜಿ ವಿಚಾರಣೆಯನ್ನು ಅ.8 ಕ್ಕೆ ಮುಂದೂಡಲಾಗಿದೆ.

ಇಂದು ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್‌ ಅವರು ಸುದೀರ್ಘ ವಾದ ಮಂಡಿಸಿದರು. ಪ್ರತಿವಾದಕ್ಕೆ ಎಸ್‌ಪಿಪಿ ಅವಕಾಶ ಕೇಳಿದರು. ಹೀಗಾಗಿ ವಿಚಾರಣೆಯನ್ನು ಮಂಗಳವಾರಕ್ಕೆ ಕೋರ್ಟ್‌ ಮುಂದೂಡಿಕೆ ಮಾಡಿದೆ.

ಆರೋಪಿಗಳಾದ ಪವಿತ್ರಾಗೌಡ ಮತ್ತು ರವಿಶಂಕರ್ ಜಾಮೀನು ಅರ್ಜಿ ವಿಚಾರಣೆಯನ್ನೂ ಮಂಗಳವಾರಕ್ಕೆ ಮುಂದೂಡಲಾಗಿದೆ. ಅಂದು ಮಧ್ಯಾಹ್ನ 12.30 ಕ್ಕೆ ವಿಚಾರಣೆ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!