ಕಳಸಾ ಬಂಡೂರಿ ಯೋಜನೆಯಿಂದ ಎಲ್ಲ ಅಡೆತಡೆಗಳು ನಿವಾರಣೆಯಾಗಲಿದೆ: ಈಶ್ವರ್‌ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳಸಾ ಬಂಡೂರಿ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.9 ರಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ನಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದು ತಿಳಿಸಿರುವುದಾಗಿ ಹೇಳಿದರು.

ಮಹದಾಯಿ ನದಿಯ ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರಕಾರ ತಕರಾರು ಮಾಡುತ್ತದೆ. ಆದರೆ, 2018ರ ಆ.14ರಂದು ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಆದರೆ, ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ. ಅಲ್ಲದೆ, ಕೇಂದ್ರೀಯ ಜಲ ಆಯೋಗ 2022ರ ಡಿ.29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!