ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ದರುಶನಕ್ಕಾಗಿ ಕಾದು ಕುಳಿತ ಸಹಸ್ರಾರು ಭಕ್ತರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕೆಲವೇ ಕ್ಷಣಗಳು ಬಾಕಿ ಇದ್ದು, ಅರ್ಚಕರ ತಂಡದಿಂದ ಪೂಜೆ ಆರಂಭವಾಗಿದೆ.

ತಲಕಾವೇರಿಯತ್ತ ಭಕ್ತಸಾಗರವೇ ಹರಿದು ಬಂದಿದೆ. ಭಾಗಮಂಡಲದಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಕಾವೇರಿ ಮಾತೆಯ ಸ್ವಾಗತಕ್ಕೆ ಕೊಡಗಿನ‌ಮೂಲ ನಿವಾಸಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ್ದಾರೆ. ಹೆಂಗೆಳೆಯರು ಆರತಿ ಎತ್ತಿ ಕಾವೇರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

ಕೊಡಗಿನ ಕುಲದೇವತೆ ಕಾವೇರಿ. ಕನ್ನಡ ನಾಡಿನ ಜೀವನದಿ ಕಾವೇರಿ. ತಾಯಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭರದಿಂದ ಸಾಗಿದ ಸಿದ್ಧತಾ ಕಾರ್ಯಗಳು. ನೂಕು ನುಗ್ಗಲು ತಡೆಯಲು ಬಿಗಿ ಬಂದೋಬಸ್ತ್. ಈ ಬಾರಿಯೂ ಕಲ್ಯಾಣಿಯಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ.

ದಕ್ಷಿಣ ಭಾರತದ ಗಂಗೆ ಅಂತಲೇ‌ ಪೂಜಿಸಲ್ಪಡುವ ಕನ್ನಡ ನಾಡಿನ ಜೀವ ನದಿ ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನ ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ಹೊರ ರಾಜ್ಯದಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ಧತೆ ನಡೆಯುತ್ತಿದೆ.

ಹೆಚ್ಚು ಜನರು ಬರುತ್ತಿರುವ ಕಾರಣ ನೂಕು‌ ನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ಹಾಗೂ ಸಿಸಿ ಕ್ಯಾಮರಾಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಭಾಗಂಡಲದಿಂದ ತಲಕಾವೇರಿಗೆ ಆಗಮಿಸುವ ಭಕ್ತಾಧಿಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಹೊರ ರಾಜ್ಯದಿಂದ ಹೆಚ್ಚಾಗಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!