ದರ್ಶನ್ ನೋಡಲು ಮತ್ತೆ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದರ್ಶನ್ ನೋಡಲು 9ನೇ ಬಾರಿ ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಅತ್ತಿಗೆ ವಿಜಯಲಕ್ಷ್ಮಿ ಜೊತೆ ದಿನಕರ್ ತೂಗುದೀಪ ಕೂಡ ಜೈಲಿಗೆ ಭೇಟಿ ನೀಡಿದ್ದಾರೆ.

ಬೇಲ್ ರಿಜೆಕ್ಟ್ ಆದ ಬಳಿಕ ಮೊದಲ ಬಾರಿಗೆ ವಿಜಯಲಕ್ಷ್ಮಿ, ದಿನಕರ್, ಚಂದ್ರು, ಸುಶಾಂತ್ ನಾಯ್ಡು ಸೇರಿದಂತೆ 6 ಜನ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಪ್ರತಿ ಬಾರಿಯಂತೆ ಇಂದು (ಅ.18) ಕೂಡ ಎರಡು ಬ್ಯಾಗ್‌ಗಳಲ್ಲಿ ಬಟ್ಟೆ, ಡ್ರೈ ಫ್ರೂಟ್ಸ್, ಬೇಕರಿ ತಿನಿಸುಗಳನ್ನು ತಂದಿದ್ದಾರೆ. ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿರುವ ದರ್ಶನ್‌ಗೆ ಚಿಕಿತ್ಸೆಗೆ ಸಹಕರಿಸುವಂತೆ ಪತ್ನಿ ಮನವಿ ಮಾಡಿದ್ದಾರೆ. ಆ ನಂತರ ಕಾನೂನು ಸಮರದ ಕುರಿತು ಚರ್ಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!