ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ: ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು,ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಆಗಾಗ ಬಿಸಿಲು, ಮೋಡಕವಿದ ವಾತಾವರಣವಿತ್ತು.ಮಧ್ಯಾಹ್ನದ ಬಳಿಕ ಕಾರ್ಮೋಡದ ಛಾಯೆ ಆವರಿಸಿದ್ದು, ಸಂಜೆಯಾಗುತ್ತಿದ್ದಂತೆ ಗುಡುಗು ಸಹಿತ ಮಳೆರಾಯ ಅಬ್ಬರಿಸಲು ಆರಂಭಿಸಿದ್ದಾನೆ. ಚರಂಡಿ, ಕಾಲುವೆಗಳು ಉಕ್ಕಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ವಿಧಾನಸೌಧ, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಮೈಸೂರು ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಕಾರ್ಪೊರೇಷನ್, ರಿಚ್ ಮಂಡ್ ಟೌನ್ ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ರಸ್ತೆಗಳು ನದಿಯಂತೆ ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಮುರಿದು ಬಿದ್ದು ಸಂಚಾರಕ್ಕೆ ಸಂಕಷ್ಟ ತಂದೊಡ್ಡಿದೆ. ಇನ್ನು ಹಲವೆಡೆ ಅಪಾರ್ಟ್ ಮೆಂಟ್, ಮನೆಗಳ ಬೇಸ್ ಮೆಂಟ್ ಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಕಂಗೆಟ್ಟು ಹೋಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!