ಕಣ್ಮುಚ್ಚಿ FDI ಸ್ವೀಕರಿಸಲು ಆಗಲ್ಲ, ದೇಶದ ಹಿತಾಸಕ್ತಿ ನಮ್ಮ ಮೊದಲ ಆದ್ಯತೆ: ಸೀತಾರಾಮನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ವಿದೇಶಿ ಹೂಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ವಿದೇಶಿ ನೇರ ಹೂಡಿಕೆಯನ್ನು ಕಣ್ಮುಚ್ಚಿ ಸ್ವೀಕರಿಸಲು ಸಾಧ್ಯವಿಲ್ಲ. ದೇಶದ ಹಿತಾಸಕ್ತಿಗೆ ಮೊದಲ ಸ್ಥಾನ. ವಿಶೇಷವಾಗಿ ದೇಶವು ತಂತ್ರಾತ್ಮಕವಾಗಿ ಸೂಕ್ಷ್ಮ ಪ್ರದೇಶದಲ್ಲಿರುವುದರಿಂದ ಎಚ್ಚರಿಕೆಯ ಅಗತ್ಯವಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅ.22 ಅಮೆರಿಕದ ವಾರ್ಟನ್ ಬಿಸಿನೆಸ್ ಸ್ಕೂಲ್​ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಎನ್.ಸೀತಾರಾಮನ್ ಮಾತನಾಡುತ್ತಾ, ತಮ್ಮ ದೇಶಕ್ಕೆ ವ್ಯಾಪಾರ ಮತ್ತು ಹೂಡಿಕೆಯ ಅಗತ್ಯವಿದೆ ಎಂದು ಹೇಳಿದರು. ಈ ಎಲ್ಲ ಖಾತರಿಗಳನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ನಮಗೆ ಹೂಡಿಕೆ ಬೇಕು, ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕಣ್ಮುಚ್ಚಿ ಒಪ್ಪಿ ಎಲ್ಲಿಂದಲೋ ಬರುತ್ತದೆ ಎಂದು ಭಾವಿಸುವಂತಿಲ್ಲ. ಹೌದು, ನಮಗೆ ವ್ಯಾಪಾರ ಮತ್ತು ಹೂಡಿಕೆ ಬೇಕು. ಆದರೆ, ಭಾರತವು ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿ ನೆಲೆಗೊಂಡಿರುವುದರಿಂದ ಕೆಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ವಿಷಯವನ್ನು ಹೊರತುಪಡಿಸಿ, ನಾವು ವಿದೇಶಿ ನೇರ ಹೂಡಿಕೆಯನ್ನು ಸ್ವಾಗತಿಸುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!