ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನೋಟಿಸ್ ನೀಡುವ ಸಾಧ್ಯತೆ ಇದೆ.
ಇಡಿ ಮತ್ತು ಲೋಕಾಯುಕ್ತ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಸ್ತುತ ಮುಡಾ ಪ್ರಕರಣದಲ್ಲಿ ಎ2, ಎ3 ಮತ್ತು ಎ4 ವಿಚಾರಣೆ ನಡೆಯುತ್ತಿದೆ. ಪ್ರಸ್ತುತ, ಎ1 ಆರೋಪಿ ವಿಚಾರಣೆ ಬಾಕಿ ಉಳಿದಿದೆ.
ಸಿಎಂಗೆ ನೋಟಿಸ್ ಕಳುಹಿಸಲು ಲೋಕಾಯುಕ್ತ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪತ್ನಿ ಪಾರ್ವತಮ್ಮ ವಿಚಾರಣೆಯ ಟಿಪ್ಪಣಿ ಬರೆಯುತ್ತಿದ್ದಾರೆ. ಟಿಪ್ಪಣಿ ಪ್ರಕ್ರಿಯೆ ಮುಗಿದ ಬಳಿಕ ಸಿಎಂಗೆ ನೋಟಿಸ್ ನೀಡುವ ಸಾಧ್ಯತೆ ಇದೆ.