ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಪೂರ್ಣ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಮನೆಗೆ ತೆರಳಲು ಪರದಾಟ ನಡೆಸಿದರು.
ಆರ್ಆರ್ ನಗರ, ಕೆಂಗೇರಿ, ವಿಜಯನಗರ, ಬ್ಯಾಟರಾಯನಪುರ, ಚಂದ್ರಲೇಔಟ್, ಜ್ಞಾನಭಾರತಿ, ನಾಗರಬಾವಿ, ಮಾಗಡಿ ರಸ್ತೆ, ಸುಮ್ಮನಹಳ್ಳಿ ಸೇರಿದಂತೆ ಹಲವೆಡೆ ನಗರದ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ಸುಮ್ಮನಹಳ್ಳಿ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಪರದಾಡಿದರು. ಟ್ರಾಫಿಕ್ ನಿಯಂತ್ರಣಕ್ಕೆ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇನ್ನು, ಬಾಗಲೂರು ಕ್ರಾಸ್ ಅಂಡರ್ಪಾಸ್ನಲ್ಲಿ ನೀರು ನಿಂತಿರುವುದರಿಂದ ಏರ್ಪೋರ್ಟ್ ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.