ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದೆ.
ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದಂತ ಕಾರು ಕುಂಚೇನಹಳ್ಳಿ ಗ್ರಾಮದ ಸಮೀಪದಲ್ಲಿ ಹಿಂದಿನಿಂದ ಬೊಲೆರೋ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಈ ಪರಿಣಾಮ ಕಾರು ಹಾನಿಯಾಗಿದ್ದು, ಅದರಲ್ಲಿದ್ದಂತ ಸಂಸದ ಬಿವೈ ರಾಘವೇಂದ್ರ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿಗೆ ಹಾನಿಯಾಗಿದ್ದರಿಂದ ಸಂಸದ ಬಿವೈ ರಾಘವೇಂದ್ರ, ಇತರೆ ಸಿಬ್ಬಂದಿಗಳು ಮತ್ತೊಂದು ಕಾರಿನಲ್ಲಿ ತಮ್ಮ ಪ್ರಯಾಣ ಮುಂದುವರೆಸಿದರು ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.


