ಹೊಸದಿಗಂತ ವರದಿ ಯಾದಗಿರಿ:
ಜಿಲ್ಲೆಯ ವಡಿಗೇರಾ ಪಟ್ಟಣದಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಸ್ಪದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಶಾಲೆಯ 9 ತರಗತಿ ಅಭ್ಯಾಸ ಮಾಡುತ್ತಿದ್ದ ಪವನ್ ತಂದೆ ಮಲ್ಲಪ್ಪ ( ಸುಮಾರು 14 ವರ್ಷ) ಬಾಲಕ ಅನುಮಾನಸ್ಪದ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ವಡಿಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


