ಡಿಕೆಶಿ ವಿರುದ್ಧ ಜಯನಗರ ಜನತೆ ಫುಲ್ ಗರಂ, ‘ನನ್ನ ತೆರಿಗೆ ನನ್ನ ಹಕ್ಕುʼ ಹೋರಾಟಕ್ಕೆ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜಯನಗರ ನಿವಾಸಿಗಳ ಆಕ್ರೋಶ. ಜಯನಗರದ ಸಂಘಟನೆಗಳು “ನನ್ನ ತೆರಿಗೆ ನನ್ನ ಹಕ್ಕು” ಎಂಬ ಘೋಷಣೆಯಡಿ ಹೋರಾಟಕ್ಕೆ ಮುಂದಾಗಿವೆ.

ಜಯನಗರ 70 ಸಂಘಟನೆಯ ಸದಸ್ಯರು ನಾಳೆ ‘ಮೈ ಟ್ಯಾಕ್ಸ್, ಮೈ ರೈಟ್ಸ್’ ಎಂಬ ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್‌ ವಿರುದ್ಧ ಉಗ್ರ ಹೋರಾಟಕ್ಕೆ ಮುಂದಾಗಿದ್ದಾರೆ.

ಈ ಪ್ರತಿಭಟನೆ ಕುರಿತು ಜಯನಗರ ಶಾಸಕ ರಾಮಮೂರ್ತಿ ಮಾತನಾಡಿ, ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು ಎಂದು ಹೇಳಿದ್ದಾರೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ‘ನನ್ನ ತೆರಿಗೆ ನನ್ನ ಹಕ್ಕು’ ಹೆಸರಿನಲ್ಲಿ ಬೃಹತ್‌ ಹೋರಾಟವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!