ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಬ್ಬಂದಿಗೆ ವೇತನ ಪಾವತಿ ಮಾಡದ ಹಿನ್ನೆಲೆಯಲ್ಲಿ ನಗರದ ಕೆಲವು ಇಂದಿರಾ ಕ್ಯಾಂಟೀನ್ಗಳಲ್ಲಿ ಊಟ ಸ್ಥಗಿತವಾಗಿದೆ. ಬಡವರ ಹಸಿವು ನೀಗಿಸುವ ಕೆಲ ಇಂದಿರಾ ಕ್ಯಾಂಟೀನ್ಗಳು ಮುಚ್ಚಿವೆ.
ಬುಧವಾರದಿಂದ ಬೆಳಗ್ಗೆ ಉಪಹಾರ, ಮಧ್ಯಾಹ್ನ, ರಾತ್ರಿ ಊಟ ಪೂರೈಕೆ ಸ್ಥಗಿತವಾಗಿದೆ. ಬಡವರ ಹಸಿವು ನೀಗಿಸುವ ಕೆಲ ಇಂದಿರಾ ಕ್ಯಾಂಟೀನ್ಗಳಲ್ಲಿ ಊಟ ಪೂರೈಕೆಯಾಗುತ್ತಿಲ್ಲ. ಇದರಿಂದ ಊಟ ಸಿಗದೇ ಜನ ಹಸಿದ ಹೊಟ್ಟೆಯಲ್ಲಿಯೇ ವಾಪಸ್ ಆಗುತ್ತಿದ್ದಾರೆ. ಕ್ಯಾಂಟೀನ್ ಸಿಬ್ಬಂದಿಗೆ ಆರು ತಿಂಗಳ ವೇತನ ಪಾವತಿ ಮಾಡದ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರಾಗಿದ್ದಾರೆ. ಇದರಿಂದ ಊಟ ಕೂಡ ಪೂರೈಕೆಯಾಗುತ್ತಿಲ್ಲ ಎನ್ನಲಾಗಿದೆ.
ಪಶ್ಚಿಮ ವಲಯದ ಮಲ್ಲೇಶ್ವರಂ, ನಂದಿನಿಲೇಔಟ್ ಇಂದಿರಾ ಕಿಚನ್ಗಳ ವ್ಯಾಪ್ತಿಯಲ್ಲಿ ಬರುವ ಇಂದಿರಾ ಕ್ಯಾಂಟೀನ್ಗಳಿಗೆ ಊಟ ಪೂರೈಕೆಯಾಗುತ್ತಿಲ್ಲ. ನೂರಾರು ಇಂದಿರಾ ಕ್ಯಾಂಟೀನ್ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಬಳ ನೀಡಿಲ್ಲ. ಈ ಕಿಚನ್ಗಳನ್ನು ಚೆಫ್ ಟಾಕ್ ಕಂಪನಿ ನಿರ್ವಹಣೆ ಮಾಡುತ್ತಿದೆ. ಈ ಕಂಪನಿಗೆ ಬಿಬಿಎಂಪಿ ಹಣ ಪಾವತಿ ಮಾಡಲಿಲ್ಲ. ಪಾಲಿಕೆ, ಚೆಫ್ ಟಾಕ್ ಕಂಪನಿಗೆ ಹಣ ನೀಡದ ಹಿನ್ನೆಲೆ ವೇತನ ಪಾವತಿ ಮಾಡದ ಕಾರಣ ಸಿಬ್ಬಂದಿ ಕಂಗಾಲಾಗಿದ್ದಾರೆ ಎನ್ನಲಾಗಿದೆ.