ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಸೀಸನ್ 12ರ ಆವೃತ್ತಿಯಲ್ಲಿ ಗೆದ್ದ ಗಿಲ್ಲಿ ನಟ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು.
ಕೆಲ ಕಾಲ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಗಿಲ್ಲಿ ನಟನಿಗೆ ಶಾಲು ಹೊದಿಸಿ, ಹಾರವನ್ನು ಹಾಕಿ ಅಭಿನಂದಿಸಿ, , ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.


