ರಾಜ್ಯದಲ್ಲಿ ಏಡ್ಸ್‌ ಸೋಂಕು ಇಳಿಕೆ ಆಗುತ್ತಿದ್ಯಾ? ಏನು ಹೇಳಿದ್ರು ದಿನೇಶ್‌ ಗುಂಡೂರಾವ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನಲ್ಲಿ ಅಕ್ಟೋಬರ್ ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ. ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್ ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.

ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು ಉಂಟಾಗುತ್ತಿವೆ. ಆದರೆ, ಅವರನ್ನು ಮಾನವೀಯತ ದೃಷ್ಟಿಯಿಂದ ನೋಡದಿದ್ದರೆ ಏಡ್ಸ್ ನಿಯಂತ್ರಣ ಅಸಾಧ್ಯ ಎಂದು ತಿಳಿಸಿದರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ಅಲ್ಲಿ ನೀಡುತ್ತಿರುವ ಚಿಕಿತ್ಸೆ, ಥೆರಪಿಗಳಿಂದಾಗಿ ಇಳಿಕೆಯಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಎಚ್‌ಐವಿ/ಏಡ್ಸ್‌ ಪತ್ತೆಯೇ ಇಲ್ಲ ಎಂದು ಆಗುವವರೆಗೆ ಕೆಲಸ ಮಾಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!