ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ವಿಧಿವಶರಾಗಿದ್ದು, ನಾಳೆ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿಅಂತ್ಯ ಸಂಸ್ಕಾರ ನಡೆಯಲಿದೆ.
ಈ ಸಂದರ್ಭ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಎಲ್ಲರೂ ಬರಲಿದ್ದಾರೆ. ವಿಶೇಷ ವಾಹನದಲ್ಲಿ ಪಕ್ಷದ ಎಲ್ಲಾ ಶಾಸಕರು ಬರ್ತಾರೆ. ಕೇಂದ್ರ ನಾಯಕರು ಬರೋ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರ ಪೋನ್ ಕೂಡ ನಾನು ರಿಸೀವ್ ಮಾಡೋಕೆ ಆಗಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯುವ ಸ್ಥಳವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.