Friday, January 23, 2026
Friday, January 23, 2026
spot_img

ಕಾಂಗ್ರೆಸ್ ವಿರುದ್ಧ ಶಶಿತರೂರ್ ಬಂಡಾಯ: ಪಕ್ಷದ ಚುನಾವಣಾ ಸಭೆಗೆ ಗೈರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷದ ನಾಯಕ ಶಶಿತರೂರ್ ಮತ್ತೆ ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ಕಾಂಗ್ರೆಸ್ ಚುನಾವಣಾ ಸಭೆಯಿಂದ ದೂರ ಉಳಿದಿದ್ದಾರೆ .

ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಸೂಕ್ತ ಗೌರವ ಸಿಗದ ಕಾರಣ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಹಲವು ತಿಂಗಳುಗಳಿಂದ ಪಕ್ಷ ಮತ್ತು ನಾಯಕತ್ವದ ವಿರುದ್ಧ ಅತೃಪ್ತಿ ಅಸಮಾಧಾನಗೊಂಡು ಅಂತರ ಕಾಪಾಡಿಕೊಂಡಿರುವ ಶಶಿ ತರೂರ್, ಬಿಜೆಪಿ ಜೊತೆ ಸಂಪರ್ಕ ಬೆಳಸಿಕೊಂಡಿದ್ದಾರೆ. ಈ ನಡುವೆ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ನಡುವೆಯೇ ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ಸಭೆಗೆ ಗೈರು ಹಾಜರಾಗಲು ನಿರ್ಧರಿಸಿದ್ದಾರೆ .

ಮಾಧ್ಯಮ ವರದಿಗಳ ಪ್ರಕಾರ, ಈ ಕಾರ್ಯಕ್ರಮದ ಸಮಯದಲ್ಲಿ, ರಾಹುಲ್ ಗಾಂಧಿ ಆಗಮಿಸುವ ಮೊದಲು ತಮ್ಮ ಭಾಷಣವನ್ನು ಮುಗಿಸಲು ಅವರನ್ನು ಕೇಳಲಾಯಿತು. ಇದನ್ನು ತರೂರ್ ಗೌರವದ ಕೊರತೆ ಎಂದು ಪರಿಗಣಿಸಿದ್ದಾರೆ. “ಸರಿಯಾದ ಗೌರವ” ಸಿಗದಿದ್ದಕ್ಕಾಗಿ ಅವರು ಪ್ರಸ್ತುತ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಇದು ತರೂರ್ ಅವರು ಪ್ರಮುಖ ಕಾಂಗ್ರೆಸ್ ಸಭೆಯಿಂದ ಹಿಂದೆ ಸರಿಯಲು ಕಾರಣವಾಗಿದೆ.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಕೇರಳ ಘಟಕದ ಹಿರಿಯ ಸದಸ್ಯರು ಮಧ್ಯಾಹ್ನ 2.30ಕ್ಕೆ ಸಭೆ ಸೇರಲಿದ್ದು ಈ ಸಭೆಗೆ ಶಶಿ ತರೂರ್ ಗೈರು ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ರಾಜಧಾನಿ ತಿರುವನಂತಪುರಂನಿಂದ ನಾಲ್ಕು ಬಾರಿ ಸಂಸದರಾಗಿರುವ ತರೂರ್ ಗೈರು ಹಾಜರಾಗಲಿರುವುದು ಕುತೂಹಲ ಕೆರಳಿಸಿದೆ. ಕೇರಳ ಮತ್ತು ಕೇಂದ್ರ ಕಾಂಗ್ರೆಸ್ ನಾಯಕರ ಜೊತೆ ಶಶಿ ತರೂರ್ ಅತೃಪ್ತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆ ಸಂಬಂಧ ಕರೆದಿರುವ ಸಭೆಗೆ ಗೈರು ಹಾಜರಾಗಲಿದ್ದಾರೆ ಎನ್ನಲಾಗಿದೆ.

Must Read