ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶಿಷ್ಟ ಅರಣ್ಯವನ್ನು ಹೊಂದಿರುವ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ವನ್ಯಧಾಮದಲ್ಲಿ ಹೊಸ ಪ್ರಭೇದದ ವರ್ಣರಂಜಿತ ಕಡಜವೊಂದು ಪತ್ತೆಯಾಗಿದೆ.
ಅಶೋಕ ಟ್ರಸ್ಟ್ ಫಾರ್ ರಿಸರ್ಚ್ ಇನ್ ಎಕಾಲಜಿ ಅಂಡ್ ಎನ್ವಿರಾನ್ಮೆಂಟ್ ಸಂಶೋಧಕರಾದ ರಂಜಿತ್ ಎ ಪಿ ಮತ್ತು ಪ್ರಿಯದರ್ಶನನ್ ಧರ್ಮ ರಾಜನ್ ಅವರು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗಸ್ವಾಮಿ ದೇವಸ್ಥಾನ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊಸ ಪ್ರಭೇದದ ಕಡಜವನ್ನು ಪತ್ತೆ ಮಾಡಿದ್ದಾರೆ.
ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ದೇಶದ 4 ವಿವಿಧ ಭಾಗಗಳಲ್ಲಿ ಈ ಹೊಸ ಪ್ರಭೇದದ ಕಡಜವನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ.