ಚೇರ್ ಮೇಲೆ ಕುಳಿತಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಹೊಸ ದಿಗಂತ ವರದಿ ವಿಜಯಪುರ:

ಚೇರ್ ಮೇಲೆ ಕುಳಿತಲ್ಲೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಗುರುವಾರ ನಡೆದಿದೆ.

ಇಲ್ಲಿನ ಸಾಹೇಬಗೌಡ ಹೆರಾಣವರ (72) ಕುಳಿತಲ್ಲೆ ಪ್ರಾಣ ಬಿಟ್ಟ ದುರ್ದೈವಿ.

ಸಾಹೇಬಗೌಡ ಹೆರಾಣವರ ಈತ, ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಚಿಕ್ಕ ಅಂಗಡಿ ಹಾಕಿಕೊಂಡು, ತಹಶೀಲ್ದಾರ್ ಕಚೇರಿಗೆ ಬರುವವರ ಅರ್ಜಿ ಫಾರ್ಮ್ ತುಂಬವ ಕೆಲಸ ಮಾಡುತ್ತಿದ್ದ.

ಇಂದು ಬೆಳಗಿನ ಜಾವ ಬಂದು ಅಂಗಡಿ ತಗೆದು ಕುರ್ಚಿ ಮೇಲೆ ಕುಳಿತು ಕೆಲಸ ಆರಂಭಿಸುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬಸವನಬಾಗೇವಾಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!