Monday, January 26, 2026
Monday, January 26, 2026
spot_img

ಸಂಘರ್ಷಕ್ಕೆ ಬ್ರೇಕ್? ರಾಜ್ಯಪಾಲರ ಅಂಗಳದಲ್ಲಿ ಗಣರಾಜ್ಯೋತ್ಸವ ಭಾಷಣಕ್ಕೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಶೀತಲ ಸಮರ ಸದ್ಯಕ್ಕೆ ತಣ್ಣಗಾದ ಲಕ್ಷಣಗಳು ಕಾಣುತ್ತಿವೆ. ಇತ್ತೀಚಿನ ಜಂಟಿ ಅಧಿವೇಶನದ ಭಾಷಣದಲ್ಲಿ ಉಂಟಾದ ಕಹಿ ಘಟನೆಯನ್ನು ಮರೆಯಲು ಸರ್ಕಾರ ಈ ಬಾರಿ ಅತ್ಯಂತ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.

ಜನವರಿ 26ರ ಗಣರಾಜ್ಯೋತ್ಸವದ ಭಾಷಣಕ್ಕೆ ರಾಜ್ಯಪಾಲರು ಅಂತಿಮ ಒಪ್ಪಿಗೆ ನೀಡಿದ್ದಾರೆ. ಲೋಕಭವನಕ್ಕೆ ಕಳುಹಿಸಲಾಗಿದ್ದ ಭಾಷಣದ ಪ್ರತಿಯನ್ನು ರಾಜ್ಯಪಾಲರು ಕೂಲಂಕಷವಾಗಿ ಪರಿಶೀಲಿಸಿ, ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಈ ಬಾರಿಯ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಕಠಿಣ ಟೀಕೆ ಅಥವಾ ವಾಗ್ದಾಳಿಗಳಿಲ್ಲದಂತೆ ಸರ್ಕಾರ ಎಚ್ಚರ ವಹಿಸಿದೆ.

ಕಳೆದ ಜಂಟಿ ಅಧಿವೇಶನದಲ್ಲಿ 11 ಪ್ಯಾರಾಗಳಿಗೆ ಆಕ್ಷೇಪ ವ್ಯಕ್ತಪಡಿಸಿ, ಕೇವಲ ಒಂದು ನಿಮಿಷದಲ್ಲಿ ರಾಜ್ಯಪಾಲರು ಭಾಷಣ ಮುಗಿಸಿದ್ದು ದೊಡ್ಡ ಮಟ್ಟದ ಸಂಘರ್ಷಕ್ಕೆ ಕಾರಣವಾಗಿತ್ತು.

Must Read