ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸರ್ಕಾರಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಸಚಿವರು ಗಾಯಗೊಂಡಿದ್ದಾರೆ.
ಸಚಿವರ ಅಧಿಕೃತ ವಾಹನ ಚಾಲಕನ ವಿರುದ್ಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಚಿವರ ಗನ್ಮ್ಯಾನ್ ಈರಪ್ಪ ಹುಣಸಿಕಟ್ಟಿ ನೀಡಿದ ದೂರಿನ ಮೇರೆಗೆ ಕಾರ್ ಚಾಲಕ ಜಿ. ಶಿವಪ್ರಸಾದ್ ವಿರುದ್ಧ ಚಾರ್ಜ್ಶೀಟ್ ಪ್ರಕಾರ ಜೀವಕ್ಕೆ ಕುತ್ತು ತರುವ, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಆರೋಪದಲ್ಲಿ ಕಲಂ 281, 125ಎ ಮತ್ತು 125ಬಿ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.