ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ರಣಜಿ ಟ್ರೋಫಿಯಲ್ಲೂ ಪಾಲ್ಗೊಳ್ಳಲಿದ್ದಾರೆ. ವಾಸ್ತವವಾಗಿ, ರೋಹಿತ್ ತಮ್ಮ ಕಳಪೆ ಫಾರ್ಮ್ ಅನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸುಮಾರು 10 ವರ್ಷಗಳ ನಂತರ ಅವರು ರಣಜಿ ಟ್ರೋಫಿಯಲ್ಲಿ ಆಡಲಿದ್ದಾರೆ.
ಮುಂಬೈ ಕ್ರಿಕೆಟ್ ಅಸೋಸಿಯೇಷನ್ ರಣಜಿ ಟ್ರೋಫಿಯ ಮುಂದಿನ ಪಂದ್ಯಕ್ಕಾಗಿ ತನ್ನ ತಂಡವನ್ನು ಪ್ರಕಟಿಸಿದೆ. ಅದರಲ್ಲಿ ರೋಹಿತ್ ಶರ್ಮಾ ಹೆಸರನ್ನು ಸೇರಿಸಲಾಗಿದೆ. ಆದಾಗ್ಯೂ, ಅವರು ನಾಯಕನಾಗಿ ಅಲ್ಲದೆ ಸಾಮಾನ್ಯ ಆಟಗಾರನಾಗಿ ಆಡಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕಾಗಿ ಮುಂಬೈ ತಂಡದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸೇರ್ಪಡೆಗೊಂಡಿದ್ದಾರೆ. ಈ ಪಂದ್ಯ ಜನವರಿ 23 ರಿಂದ ಎಂಸಿಎ-ಬಿಕೆಸಿ ಮೈದಾನದಲ್ಲಿ ಆರಂಭವಾಗಲಿದೆ. ಈ ತಂಡದಲ್ಲಿ ಒಟ್ಟು 17 ಆಟಗಾರರು ಆಯ್ಕೆಯಾಗಿದ್ದಾರೆ.
ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾವನ್ನು ಘೋಷಿಸುವಾಗ ಸ್ವತಃ ರೋಹಿತ್ ಶರ್ಮಾ ಅವರೇ ರಣಜಿಯಲ್ಲಿ ಆಡುವುದಾಗಿ ಖಚಿತಪಡಿಸಿದ್ದರು. ಅದರಂತೆ ದೇಶೀ ಅಂಗಳಕ್ಕೆ ಕಾಲಿಟ್ಟಿರುವ ರೋಹಿತ್, ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಡಲಿದ್ದಾರೆ.
ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಆಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಆಕಾಶ್ ಆನಂದ್ (ವಿಕೆಟ್ ಕೀಪರ್), ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶುಕ್ ಸಿಂಗ್, ಸಿಲ್ವೆಸ್ಟರ್ ಡಿಸೋಜಾ, ರಾಯ್ಸ್ಟನ್ ಡಯಾಸ್, ಕಾರ್ಶ್ ಕೊಠಾರಿ.