ಹೊಸ ದಿಗಂತ ಡಿಜಿಟಲ್ ಡೆಸ್ಕ್:
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದ್ದು, 45 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಪೈಕಿ ಕರ್ನಾಟಕದ ʼಪುಸ್ತಕ ಮನೆʼ ಗ್ರಂಥಾಲಯ ಖ್ಯಾತಿಯ ಅಂಕೇ ಗೌಡ ಅವರಿಗೆ ಈ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಒಟ್ಟು 45 ಸಾಧಕರಿಗೆ ಪದ್ಮಶ್ರೀ ಲಭಿಸಿದೆ.
ಕರ್ನಾಟಕದ ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ ಡಾ ಸುರೇಶ್ ಹನಗವಾಡಿ ಹಾಗೂ ಬೆಂಗಳೂರಿನ ಸಮಾಜ ಸೇವಕಿ ಎಸ್ಜಿ ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭ್ಯಸಿದೆ.
ಈ ವರ್ಷದ ಪದ್ಮ ಪ್ರಶಸ್ತಿಗೆ ಕೇಂದ್ರ ಸರ್ಕಾರವು ಭಾರತದ ಉದ್ದಗಲಕ್ಕೂ ಇರುವ ವಿವಿಧ ರೀತಿಯ ಪ್ರಚಾರವಿಲ್ಲದ ವೀರರನ್ನು ಗುರುತಿಸಿದೆ. ಇವರಲ್ಲಿ ಹಿಂದುಳಿದ ಮತ್ತು ದಲಿತ ಸಮುದಾಯಗಳು, ಪ್ರಾಚೀನ ಬುಡಕಟ್ಟು ಜನಾಂಗದವರು ಮತ್ತು ದೂರದ ಮತ್ತು ಕಷ್ಟಕರ ಪ್ರದೇಶಗಳಿಂದ ಬಂದವರು ಸೇರಿದ್ದಾರೆ. ಆರೋಗ್ಯ ರಕ್ಷಣೆ, ಶಿಕ್ಷಣ, ಜೀವನೋಪಾಯ, ನೈರ್ಮಲ್ಯ, ಸುಸ್ಥಿರತೆ ಇತ್ಯಾದಿಗಳನ್ನು ಉತ್ತೇಜಿಸುವಲ್ಲಿ ಕೆಲಸ ಮಾಡುವ ದಿವ್ಯಾಂಗರು, ಮಹಿಳೆಯರು, ಮಕ್ಕಳು, ದಲಿತರು ಮತ್ತು ಬುಡಕಟ್ಟು ಜನಾಂಗದವರ ಸೇವೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟವರು ಇದ್ದಾರೆ.
2026 ಪದ್ಮಶ್ರೀ ಪ್ರಶಸ್ತಿ ಪಡೆದ 45 ಮಂದಿ ಸಂಪೂರ್ಣ ಪಟ್ಟಿ
ಅಂಕೇಗೌಡ – ಕರ್ನಾಟಕ
ಅರ್ಮಿಡಾ ಫರ್ನಾಂಡಿಸ್ – ಮಹಾರಾಷ್ಟ್ರ
ಭಗವಾನ್ದಾಸ್ ರೈಕ್ವಾರ್ – ಮಧ್ಯಪ್ರದೇಶ
ಭಿಕ್ಲ್ಯಾ ಲಡಕ್ಯಾ ಧಿಂಡಾ – ಮಹಾರಾಷ್ಟ್ರ
ಬ್ರಿಜ್ ಲಾಲ್ ಭಟ್ – ಜಮ್ಮು ಮತ್ತು ಕಾಶ್ಮೀರ
ಬುಧ್ರಿ ಟಾಟಿ – ಛತ್ತೀಸ್ಗಢ
ಚರಣ್ ಹೆಂಬ್ರಮ್ – ಪಶ್ಚಿಮ ಬಂಗಾಳ
ಚಿರಂಜಿ ಲಾಲ್ ಯಾದವ್ – ಛತ್ತೀಸ್ಗಢ
ಧಾರ್ಮಿಕ್ ಲಾಲ್ ಚುನಿಲಾಲ್ ಪಾಂಡ್ಯ – ಗುಜರಾತ್
ಗಫ್ರುದ್ದೀನ್ ಮೇವಾಟಿ ಜೋಗಿ – ಹರಿಯಾಣ
ಹ್ಯಾಲಿ ವಾರ್ – ಮೇಘಾಲಯ
ಇಂದರ್ಜಿತ್ ಸಿಂಗ್ ಸಿಧು – ಪಂಜಾಬ್
ಕೆ. ಪಜನಿವೇಲ್ – ಪುದುಚೇರಿ
ಕೈಲಾಶ್ ಚಂದ್ರ ಪಂತ್ – ಉತ್ತರಾಖಂಡ
ಖೇಮ್ ರಾಜ್ ಸುಂದ್ರಿಯಾಲ್ – ಉತ್ತರಾಖಂಡ
ಕೊಲ್ಲಕ್ಕಾಯಿಲ್ ದೇವಕಿ ಅಮ್ಮ ಜಿ – ಕೇರಳ
ಕುಮಾರಸಾಮಿ ತಂಗರಾಜ್ – ತೆಲಂಗಾಣ
ಮಹೇಂದ್ರ ಕುಮಾರ್ ಮಿಶ್ರಾ – ಒಡಿಶಾ
ಮಿರ್ ಹಾಜಿಭಾಯಿ ಕಸಂಭಾಯಿ – ಗುಜರಾತ್
ಮೋಹನ್ ನಾಗರ್ – ಉತ್ತರ ಪ್ರದೇಶ
ನರೇಶ್ ಚಂದ್ರ ದೇವ್ ವರ್ಮಾ – ತ್ರಿಪುರ
ನೀಲೇಶ್ ವಿನೋದ್ಚಂದ್ರ ಮಾಂಡ್ಲೆವಾಲಾ – ಗುಜರಾತ್
ನೂರುದ್ದೀನ್ ಅಹ್ಮದ್ – ಅಸ್ಸಾಂ
ಓದುವಾರ್ ತಿರುತಣಿ ಸ್ವಾಮಿನಾಥನ್ – ತಮಿಳುನಾಡು
ಪದ್ಮಾ ಗುರ್ಮೇಟ್ – ಲಡಾಖ್
ಪೋಖಿಲಾ ಲೆಕ್ತೆಪಿ – ಅಸ್ಸಾಂ
ಪುಣ್ಯಮೂರ್ತಿ ನಟೇಸನ್ – ತಮಿಳುನಾಡು
ಆರ್. ಕೃಷ್ಣನ್ – ತಮಿಳುನಾಡು
ರಘುಪತ್ ಸಿಂಗ್ – ರಾಜಸ್ಥಾನ
ರಘುವೀರ್ ತುಕಾರಾಮ್ ಖೇಡ್ಕರ್ – ಮಹಾರಾಷ್ಟ್ರ
ರಾಜಸ್ಥಪತಿ ಕಾಳಿಯಪ್ಪ ಗೌಂಡರ್ – ತಮಿಳುನಾಡು
ರಾಮ ರೆಡ್ಡಿ ಮಾಮಿಡಿ – ತೆಲಂಗಾಣ
ರಾಮಚಂದ್ರ ಗೋಡ್ಬೋಲೆ ಮತ್ತು ಸುನೀತಾ ಗೋಡ್ಬೋಲೆ – ಮಹಾರಾಷ್ಟ್ರ
ಎಸ್. ಜಿ. ಸುಶೀಲಮ್ಮ – ಕರ್ನಾಟಕ
ಸಾಂಗ್ಯುಸಾಂಗ್ ಎಸ್. ಪೊಂಗೆನರ್ – ನಾಗಾಲ್ಯಾಂಡ್
ಶಫಿ ಶೌಕ್ – ಜಮ್ಮು ಮತ್ತು ಕಾಶ್ಮೀರ
ಶ್ರೀರಂಗ್ ದೇವಬಾ ಲಾಡ್ – ಮಹಾರಾಷ್ಟ್ರ
ಶ್ಯಾಮ್ ಸುಂದರ್ – ಬಿಹಾರ
ಸಿಮಾಂಚಲ ಪಾತ್ರೋ – ಒಡಿಶಾ
ಸುರೇಶ್ ಹನಗವಾಡಿ – ಕರ್ನಾಟಕ
ಟಗಾ ರಾಮ್ ಭೀಲ್ – ರಾಜಸ್ಥಾನ
ಟೆಚಿ ಗುಬಿನ್ – ಅರುಣಾಚಲ ಪ್ರದೇಶ
ತಿರುವಾರೂರ್ ಭಕ್ತವತ್ಸಲಂ – ತಮಿಳುನಾಡು
ವಿಶ್ವ ಬಂಧು – ಪಂಜಾಬ್
ಯುಮ್ನಮ್ ಜಾತ್ರಾ ಸಿಂಗ್ – ಮಣಿಪುರ



