ಚಾರ್ಮಾಡಿ ಕಾಳ್ಗಿಚ್ಚು: ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್’ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಕಾಡ್ಗಿಚ್ಚು ಕುರಿತು ವಿವರವಾದ ವರದಿ ಸಲ್ಲಿಸುವಂತ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಗುರುವಾರ ಸೂಚನೆ ನೀಡಿದೆ.

ಕಾಡ್ಗಿಚ್ಚಿನಿಂದ ಆಗಿರುವ ಹಾನಿ, ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಹಾಗೂ ಬೆಂಕಿ ನಂದಿಸಲು ತೆಗೆದುಕೊಂಡ ಸಮಯದ ಬಗ್ಗೆ 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆಯವರು ಸೂಚನೆ ನೀಡಿದ್ದಾರೆ.

ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ಸನ್ನದ್ಧರಾಗಿರುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ, ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಡ್ಗಿಚ್ಚು ತಡೆಯಲು, ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿ, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!