ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ತಾಯಿ-ಮಗಳು ಸಾವು

ಹೊಸದಿಗಂತ ವರದಿ, ಬೆಳಗಾವಿ:

ಪ್ರಯಾಗರಾಜನ ಕುಂಭಮೇಳದಲ್ಲಿ ಕಳೆದ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ ಮತ್ತು ಮಗಳು ಸಾವನ್ನಪ್ಪಿದ್ದಾರೆ.

ಇಲ್ಲಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮತ್ತು ಅವರ ಮಗಳು ಮೇಘಾ ಹತ್ತರವಾಠ ಮೃತ ದುರ್ದೈವಿಗಳು.

ಪ್ರಯಾಗರಾಜನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿದ್ದ ಅವರು ಅಲ್ಲಿ ನಡೆದ ಕಾಲ್ತುಳಿತದ ವೇಳೆ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಇಲ್ಲಿನ ಅವರ‌ಕುಟುಂಬಸ್ಥರಿಗೂ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಫೋನ್ ರಿಂಗ್ ಆಗತಿದ್ದರೂ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿತ್ತು. ಆದರೀಗ ಇವರಿಬ್ಬರೂ ಸಾವನ್ನಪ್ಪಿದ ಮಾಹಿತಿ ದೊರೆತಿದೆ.

ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಹದಿಮೂರು ಜನರೊಂದಿಗೆ ಇವರಿಬ್ಬರೂ ಪ್ರಯಾಗರಾಜಗೆ ಪ್ರಯಾಣ ಬೆಳೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!