ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣದ ಚಿತ್ರಣವೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಗೆ ಧನ್ಯವಾದ ಹೇಳಲು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಋಣ ತೀರಿಸುವ ಕಾರ್ಯಕ್ರಮ ಇದು. ನಿಮ್ಮೆಲ್ಲರ ಬೆಂಬಲಕ್ಕೆ ನಾವು ಧನ್ಯವಾದ ಹೇಳಲು ಬಯಸುತ್ತೇವೆ. ನಾಲ್ಕು ಶಾಸಕರನ್ನು ಆಯ್ಕೆ ಮಾಡುವ ಮೂಲಕ ಜಿಲ್ಲೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿದ್ದೀರಿ. ಇದೀಗ ಅಭಿವೃದ್ಧಿಯ ಮೂಲಕ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣದ ಚಿತ್ರವನ್ನು ಬದಲಾಯಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕ್ಷೇತ್ರದ ಜನರು ಸೂಕ್ತ ಉತ್ತರ ನೀಡಿದ್ದಾರೆ ಎಂದು ಹೇಳಿದ ಶಿವಕುಮಾರ್, ನೀವು ಕೇವಲ ಚನ್ನಪಟ್ಟಣಕ್ಕೆ ಮಾತ್ರ ಉತ್ತರ ನೀಡಿಲ್ಲ, ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದೀರಿಯ. ಚನ್ನಪಟ್ಟಣದ ಜನರನ್ನು ಸುಮ್ಮನೆ ಕೂರಿಸಲು ಸಾಧ್ಯವಿಲ್ಲ ಎಂದು ನೀವು ತೋರಿಸಿದ್ದೀರಿ ಎಂದು ತಿಳಿಸಿದರು.