ಇದು 3 ಸದಸ್ಯರ ಆಯೋಗ: AAP​ ಆರೋಪಕ್ಕೆ ಚುನಾವಣಾ ಆಯೋಗ ಖಡಕ್​ ಉತ್ತರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ಆಯೋಗವನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಡೆಸುತ್ತಿದ್ದಾರೆ ಎಂಬ ಆಮ್ ಆದ್ಮಿ ಪಕ್ಷದಿಂದ ಬಂದ ಆರೋಪಕ್ಕೆ ಭಾರತೀಯ ಚುನಾವಣಾ ಆಯೋಗ ತರಾಟೆಗೆ ತೆಗೆದುಕೊಂಡಿದೆ.

ರಾಜಕೀಯ ಪಕ್ಷಗಳ ಇಂತಹ ಆರೋಪಕ್ಕೆ ಚುನಾವಣಾ ಆಯೋಗ ಎದುರುವುದಿಲ್ಲ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹೇಳಿದೆ. ಆಯೋಗವು, ದೆಹಲಿ ಚುನಾವಣೆಯಲ್ಲಿ ಚುನಾವಣಾ ಆಯೋಗವನ್ನು ಒಂದೇ ಸದಸ್ಯ ಸಂಸ್ಥೆಯಂತೆ ದೂಷಿಸಲು ಪದೇ ಪದೇ ಉದ್ದೇಶಪೂರ್ವಕ ಒತ್ತಡ ತಂತ್ರಗಳನ್ನು 3 ಸದಸ್ಯರ ಆಯೋಗವು ಒಟ್ಟಾಗಿ ಗಮನಿಸಿದೆ. ಇದರೊಂದಿಗೆ ಇಂತಹ ಹೇಳಿಕೆಯನ್ನು ಬುದ್ಧಿವಂತಿಕೆಯಿಂದ ಸ್ವೀಕರಿಸಿದ್ದು, ಧೈರ್ಯದಿಂದ ಮತ್ತು ಅಂತಹ ಪ್ರಚೋದನೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದೆ.

ಬಿಜೆಪಿಯ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯನ್ನು ಚುನಾವಣಾ ಆಯೋಗ ನಿರ್ಲಕ್ಷಿಸುತ್ತಿದೆ ಎಂದು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಎಎಪಿಯ ಉನ್ನತ ನಾಯಕರು ಆರೋಪಿಸಿದ್ದರು.

ನಾಳೆ ದೆಹಲಿಯಲ್ಲಿ ಚುನಾವಣೆ ನಡೆಯಲಿದೆ, ಎಎಪಿ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿ ಮುಂದಿನ ಸರ್ಕಾರವನ್ನು ರಚಿಸಲು ಪ್ರಯತ್ನಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here